ಸುಬ್ರಹ್ಮಣ್ಯ: ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ.
ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ.
ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.