ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧನ್ವಂತರಿ ಹೋಮ

ದೇವಳದಲ್ಲಿ ಪವಮಾನ ಸೂಕ್ತ ಪಾರಾಯಣ, ಜಪ

​ಪ್ರಜಾವಾಣಿ ವಾರ್ತೆ
Published 13 ಮೇ 2021, 8:51 IST
Last Updated 13 ಮೇ 2021, 8:51 IST
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರ ನೇತೃತ್ವದಲ್ಲಿ ಧನ್ವಂತರಿ ಹೋಮ ನೆರವೇರಿತು.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರ ನೇತೃತ್ವದಲ್ಲಿ ಧನ್ವಂತರಿ ಹೋಮ ನೆರವೇರಿತು.   

ಸುಬ್ರಹ್ಮಣ್ಯ: ಕೋವಿಡ್‌ ನಿರ್ಮೂಲನೆಗಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಧನ್ವಂತರಿ ಹೋಮ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಹೋಮದ ವೈದಿಕ ವಿಧಿ ನೆರವೇರಿಸಿದರು. ಮೇ 5ರಿಂದ ದೇವಳದ 10 ಜನ ಪುರೋಹಿತರು ತುಪ್ಪದೊಂದಿಗೆ ಒಂದು ಲಕ್ಷ ಧನ್ವಂತರಿ ಜಪ ನೆರವೇರಿಸಿದರು. ಈ ತುಪ್ಪವನ್ನು ಧನ್ವಂತರಿ ಹೋಮಕ್ಕೆ ಅರ್ಪಿಸಲಾಯಿತು.

ದೇವರಲ್ಲಿ ಪ್ರಾರ್ಥನೆ: ಹೋಮದ ಬಳಿಕ ದೇಶ ಹಾಗೂ ರಾಜ್ಯದ ಜನತೆಗೆ ದೇವರು ಆರೋಗ್ಯ ಸಮೃದ್ಧಿಯನ್ನು ಕರುಣಿಸಲಿ ಹಾಗೂ ಸಾಂಕ್ರಾಮಿಕ ರೋಗವು ಲೋಕದಿಂದ ಶೀಘ್ರ ತೊಲಗಿ ಸರ್ವರೂ ಆರೋಗ್ಯವಂತರಾಗಲಿ ಎಂದು ಸುಬ್ರಹ್ಮಣ್ಯನಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ADVERTISEMENT

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಪ್ರಸನ್ನ ದರ್ಬೆ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ ರಾವ್ ಇದ್ದರು.

ಕೋವಿಡ್ ನಿಯಮ ಪಾಲಿಸಿ, ಋಗ್ವೇದ, ಯರ್ಜುವೇದ, ಸಾಮವೇದ ಪಾರಾಯಣಗಳು, ರುದ್ರ ಪಾರಾಯಣ, ಪವಮಾನ ಸೂಕ್ತ ಪಾರಾಯಣ, ಸರ್ಪಸೂಕ್ತ, ಸರ್ಪತ್ರಯ ಮಂತ್ರ ಜಪ, ಮನ್ಯುಸೂಕ್ತ, ವಿಷ ಕ್ರಿಮಿಹರ ಮಂತ್ರ ಜಪಗಳು ದೇವಳದಲ್ಲಿ ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.