ADVERTISEMENT

75ನೇ ವರ್ಷಕ್ಕೆ ಕಾಲಿಟ್ಟ ವೀರೇಂದ್ರ ಹೆಗ್ಗಡೆ: ಸರಳ ಆಚರಣೆ, ಶುಭಾಶಯಗಳ ಸುರಿಮಳೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 13:48 IST
Last Updated 25 ನವೆಂಬರ್ 2022, 13:48 IST
75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಶಾಸಕ ಹರೀಶ್ ಪೂಂಜ ಜನ್ಮದಿನದ ಶುಭಾಶಯ ಕೋರಿದರು
75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಶಾಸಕ ಹರೀಶ್ ಪೂಂಜ ಜನ್ಮದಿನದ ಶುಭಾಶಯ ಕೋರಿದರು   

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ 74ನೇ ಜನ್ಮದಿನವನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಸರಳವಾಗಿ ಆಚರಿಸಲಾಯಿತು.

ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ಅಭಿಮಾನಿಗಳು ಹೆಗ್ಗಡೆ ಅವರಿಗೆ ಜನ್ಮದಿನದ ಶುಭಾಶಯ ಅರ್ಪಿಸಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಡಿ.ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಗ್ಗಡೆ ಅವರಿಗೆ ಶುಭಾಶಯ ಸಲ್ಲಿಸಿದರು.

ADVERTISEMENT

ಹೆಗ್ಗಡೆ ಅವರಿಗೆ ದೂರವಾಣಿ, ವಿದ್ಯುದಂಚೆ, ಪತ್ರಗಳ ಮೂಲಕವೂ ಶುಭಾಶಯಗಳು ಹರಿದು ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.