ADVERTISEMENT

ಧರ್ಮಸ್ಥಳ ಪ್ರಕರಣ: ಹೇಳಿಕೆ ದಾಖಲಿಸಿದ ಜಯಂತ್ ಪತ್ನಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 23:30 IST
Last Updated 3 ಅಕ್ಟೋಬರ್ 2025, 23:30 IST
<div class="paragraphs"><p>ಧರ್ಮಸ್ಥಳ ಪ್ರಕರಣ</p></div>

ಧರ್ಮಸ್ಥಳ ಪ್ರಕರಣ

   

ಮಂಗಳೂರು: ಧರ್ಮಸ್ಥಳ ಬೆಳವಣಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಆರೋಪ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ ಅವರ ಪತ್ನಿ ಎಸ್‌ಐಟಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. 

ಜಯಂತ್ ಅವರ ಪತ್ನಿ ಬೆಂಗಳೂರಿನಿಂದ ಬೆಳಿಗ್ಗೆ ಬೆಳ್ತಂಗಡಿಗೆ ಬಂದು ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಅಧಿ
ಕಾರಿಗಳ ಬಳಿಗೆ ತೆರಳಿದ್ದರು. ಸಂಜೆ 4.30ರ ವರೆಗೂ ಮಾಹಿತಿ ಪಡೆದುಕೊಳ್ಳಲಾಯಿತು. 

ADVERTISEMENT

‘ಪ್ರಜಾವಾಣಿ’ ಜೊತೆ ಮಾತನಾಡಿದ ಜಯಂತ್‌, ‘ನೋಟಿಸ್ ಬಂದಿತ್ತು. ನಾನು ಕೆಲವು ದಿನಗಳ ಹಿಂದೆ ಹೇಳಿಕೆ ದಾಖಲಿಸಿದ್ದೆ. ಪತ್ನಿಗೆ ಅನಾರೋಗ್ಯ ಇದ್ದ ಕಾರಣ ಸ್ವಲ್ಪ ತಡವಾಯಿತು. ಎಂಜಿನಿಯರಿಂಗ್ ಓದುತ್ತಿರುವ ಮಗನೊಂದಿಗೆ ತೆರಳಿ ಅವರು ಹೇಳಿಕೆ ಕೊಟ್ಟಿದ್ದಾರೆ’ ಎಂದು ತಿಳಿಸಿದರು.

‘ಬೇರೆ ಊರಿನಿಂದ ಹೋರಾಟಗಾರರು ಯಾರು ಬಂದರೂ ಅವರಿಗೆ ಊಟ, ಆಶ್ರಯ ನೀಡುವ ಸಂಪ್ರದಾಯ ಬೆಳೆಸಿಕೊಂಡಿದ್ದೇವೆ. ಸಾಕ್ಷಿ ದೂರುದಾರನಿಗೂ ಹಾಗೇ ಊಟ ಹಾಕಿದ್ದೆವು. ಎಸ್‌ಐಟಿಯವರು ಕರೆದಾಗ ಹೋಗುವುದು ನಮ್ಮ ಕರ್ತವ್ಯ. ಆದ್ದರಿಂದ ಮೂವರೂ ಹೇಳಿಕೆ ಕೊಟ್ಟಿದ್ದೇವೆ’ ಎಂದು ಅವರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.