ADVERTISEMENT

ಧರ್ಮಸ್ಥಳ ಪ್ರಕರಣ: ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಮತ್ತೊಮ್ಮೆ ಮಹಜರು

ವಿಠಲ ಗೌಡನನ್ನು ಕಾಡಿಗೆ ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 12:26 IST
Last Updated 10 ಸೆಪ್ಟೆಂಬರ್ 2025, 12:26 IST
   

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡವು (ಎಸ್ಐಟಿ) ಸಾಕ್ಷಿ ದೂರುದಾರ ತಂದೊಪ್ಪಿಸಿದ್ದ ಬುರುಡೆ ಇದ್ದ ಜಾಗವನ್ನು ತೋರಿಸಿದ್ದ ಪಾಂಗಾಳದ ವಿಠಲ ಗೌಡ ಅವರನ್ನು ನೇತ್ರಾವತಿ ಸ್ನಾನಘಟ್ಟ ಪಕ್ಕದ ಕಾಡಿನೊಳಗೆ ಬುಧವಾರ ಮತ್ತೊಮ್ಮೆ ಕರೆದೊಯ್ದು ಮಹಜರು ನಡೆಸಿತು.

ವಿಠಲ ಗೌಡ ಬುಧವಾರ ಬೆಳಿಗ್ಗೆ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದರು. ಅವರಿಂಮದ ಹೇಳಿಕೆ ದಾಖಲಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಎಸ್‌.ಪಿ. ಸೈಮನ್ ನೇತೃತ್ವದಲ್ಲಿ ವಿಠಲ ಗೌಡನನ್ನು ಬುರುಡೆ ಸಿಕ್ಕಿದ್ದ ಜಾಗಕ್ಕೆ ಕರೆದೊಯ್ದರು.

ವಿಠಲ ಗೌಡನನ್ನು ಕರೆದೊಯ್ದ ಎಸ್‌ಐಟಿ ಅಧಿಕಾರಿಗಳು

ADVERTISEMENT

ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಬುರುಡೆ ಇದ್ದ ಜಾಗವನ್ನು ವಿಠಲ ಗೌಡ ಅವರೇ ಸಾಕ್ಷಿದೂರುದಾರನಿಗೆ ತೋರಿಸಿದ್ದರು. ಅಲ್ಲಿಂದ ತೆಗೆದ ಬುರುಡೆಯನ್ನೇ ಸಾಕ್ಷಿ ದೂರುದಾರ ಪೊಲೀಸರ ವಶಕ್ಕೆ ಒಪ್ಪಿಸಿದ್ದ. ಆ ಜಾಗವನ್ನು ಎಸ್‌ಐಟಿ ಅಧಿಕಾರಿಗಳು ಸೆ.6ರಂದು ಸಂಜೆ ಮಹಜರು ನಡೆಸಿದ್ದರು. ಈ ವೇಳೆ ಆ ಪ್ರದೇಶದಲ್ಲಿ ಮೃತದೇಹ ಅವಶೇಷಗಳು ನೆಲದ ಮೇಲೆಯೇ ಕಂಡುಬಂದಿದ್ದವು. ಅಂದು ಕತ್ತಲಾವರಿಸಿದ್ದರಿಂದ ಆ ಪ್ರದೇಶವನ್ನು ಕೂಲಂಕಷವಾಗಿ ಪರಿಶೀಲಿಸುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಎಸ್‌ಐಟಿ ಅಧಿಕಾರಿಗಳು ವಿಠಲ ಗೌಡ ಅವರನ್ನು ಮತ್ತೊಮ್ಮೆ ಅಲ್ಲಿಗೆ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.