ADVERTISEMENT

ಧರ್ಮಸ್ಥಳ: ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 11:15 IST
Last Updated 24 ಫೆಬ್ರುವರಿ 2020, 11:15 IST
 ಧರ್ಮಸ್ಥಳದಲ್ಲಿ  ಸೋಮವಾರ ಕಂಬಳದ ಕೋಣಗಳ ಓಟಗಾರ ಶ್ರೀನಿವಾಸ ಗೌಡ ಅವರನ್ನು  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು
 ಧರ್ಮಸ್ಥಳದಲ್ಲಿ  ಸೋಮವಾರ ಕಂಬಳದ ಕೋಣಗಳ ಓಟಗಾರ ಶ್ರೀನಿವಾಸ ಗೌಡ ಅವರನ್ನು  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು   

ಉಜಿರೆ: ‘ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದ ತಮ್ಮ ನಿವಾಸದಲ್ಲಿ ಸೋಮವಾರ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡುಬಿದಿರೆಯ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅವರು ಅಭಿನಂದಿಸಿದರು.

‘ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಮನೊನಿಯಂತ್ರಣ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟ್ ಧರಿಸಬಾರದು. ಬಿಳಿ ಧೋತಿ ಉಡಬೇಕು’ ಎಂದು ಹೊಸ ಧೋತಿಯನ್ನು ಉಡುಗೊರೆಯಾಗಿ ನೀಡಿದರು.

ADVERTISEMENT

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲೀಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರಾದ ಜ್ವಾಲಾಪ್ರಸಾದ್ ಈದು, ಸುಭಾಶ್ಚಂದ್ರ ಚೌಟ, ಎ.ಪಿ.ಎಂ.ಸಿ. ಅಧ್ಯಕ್ಷ ಪ್ರವೀಣ ಕುಮಾರ್ ಜೈನ್, ಚಿಂತನ್ ಲೋಬೊ, ತರಬೇತಿದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.