ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕಗಳನ್ನು ಲಾಯಿಲ ಪಡ್ಲಾಡಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ, 13 ವರ್ಷಗಳಿಂದ ದೀಪಕ್ ಜಿ.ಅವರ ನೇತೃತ್ವದ ರಾಜಕೇಸರಿ ಹಲವು ಸೇವಾ ಯೋಜನೆಗಳನ್ನು ಹಮ್ಮಿಕೊಂಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಮಾತನಾಡಿದರು.
ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಭಾಗವಹಿಸಿದ್ದರು. ಪ್ರಭಾರ ಮುಖ್ಯ ಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹ ಶಿಕ್ಷಕ ಮಧು ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.