ದಕ್ಷಿಣ ಕನ್ನಡ: ಕೊರೊನಾ ಅಂಧಕಾರ ಓಡಿಸಲು ಎಲ್ಲರೂ ಒಂದೇ ಸಮಯಕ್ಕೆ ದೀಪ ಬೆಳಗೋಣ, ನಾವು ಯಾರೂ ಒಂಟಿಯಲ್ಲ ಎಂದು ಸಾರೋಣ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿದ ಮಂಗಳೂರಿನ ನಾಗರಿಕರು ನಗರದ ವಿವಿಧೆಡೆ ಭಾನುವಾರ ರಾತ್ರಿ 9 ಗಂಟೆಗೆ ದೀಪ ಬೆಳಗಿದರು. ಮಕ್ಕಳು, ಹಿರಿಯರು ಸೇರಿದಂತೆ ಎಲ್ಲರೂ ದೀಪ ಬೆಳಗಿದರು. ದೀಪಗಳನ್ನಿಟ್ಟು ಭಾರತದ ನಕ್ಷೆಯನ್ನು ರಚಿಸಿದ್ದು ಗಮನ ಸೆಳೆಯಿತು.
ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.