ADVERTISEMENT

ದಕ್ಷಿಣ ಕನ್ನಡ: ಪಿ.ಯು ಗಣಿತ ಪರೀಕ್ಷೆ– 65 ಮಂದಿ ಗೈರು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 7:45 IST
Last Updated 11 ಮಾರ್ಚ್ 2023, 7:45 IST
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದ್ವಿತೀಯ ಪಿ.ಯು. ಗಣಿತ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 65 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಒಟ್ಟು 13,732 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು. ಅವರಲ್ಲಿ 29 ಮಂದಿ ಪರೀಕ್ಷೆಗೆ ಹಾಜರಾಗಿಲ್ಲ.

ಪುನರಾವರ್ತಿತ ಪರೀಕ್ಷೆ ಬರೆಯಬೇಕಾಗಿದ್ದ 238 ವಿದ್ಯಾರ್ಥಿಗಳಲ್ಲಿ 36 ಮಂದಿ ಗೈರಾಗಿದ್ದಾರೆ.

ADVERTISEMENT

‘ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆದ ಬಗ್ಗೆ ವರದಿಯಾಗಿಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಯಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.