ADVERTISEMENT

ಅಂಬೇಡ್ಕರ್‌ ವೃತ್ತ ಶಂಕುಸ್ಥಾಪನೆ ರದ್ದು ಬೇಡ: ದಲಿತ ಸಂಘಟನೆಗಳ ಸಮನ್ವಯ ಸಮಿತಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 2:59 IST
Last Updated 15 ಆಗಸ್ಟ್ 2024, 2:59 IST

ಮಂಗಳೂರು: ಬಿ.ಆರ್‌.ಅಂಬೇಡ್ಕ‌ರ್ ಅವರ ಪುತ್ಥಳಿಯನ್ನು ಒಳಗೊಂಡ ಆಕರ್ಷಕ ಸ್ಮಾರಕ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಇದೇ ‌15 ರಂದು ನಿಗದಿತ ಸಮಯದಲ್ಲೇ ಏರ್ಪಡಿಸಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ  ಮುಖಂಡರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ  ಮನವಿ ಸಲ್ಲಿಸಿದ್ದಾರೆ.

‘30 ವರ್ಷಗಳ ಹೋರಾಟದ ಫಲವಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ₹ 40 ಲಕ್ಷ ಮೊತ್ತದಲ್ಲಿ ವಿನೂತನ ಶೈಲಿಯಲ್ಲಿ ಅಂಬೇಡ್ಕರ್ ವೃತ್ತವನ್ನು ನಿರ್ಮಿಸಲಾಗುತ್ತಿದೆ. ಈ ಹೋರಾಟದಲ್ಲಿ ಭಾಗವಹಿಸದ ಸ್ವಯಂಘೋಷಿತ ನಾಯಕರು ಉದ್ದೇಶಿತ ಕಾರ್ಯಕ್ರಮವನ್ನು ಹಾಳುಗೆಡವಲು ಯತ್ನಿಸಿದ್ದಾರೆ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ಒಮ್ಮತದಿಂದ, ಪ್ರಜಾಸತ್ತಾತ್ಮಕವಾಗಿ ನಡೆಯುತ್ತಿರುವ  ಶಂಕುಸ್ಥಾಪನೆಯನ್ನು ಒಬ್ಬ ವ್ಯಕ್ತಿ ಅಥವಾ ಸಂಘದ ವಿರೋಧಕ್ಕೆ ಮಣಿದು ರದ್ದು ಮಾಡಬಾರದು’ ಎಂದು ಸಮಿತಿಯ  ಪ್ರಧಾನ ಸಂಚಾಲಕ ಎಂ.ದೇವದಾಸ್, ಉಪಪ್ರಧಾನ ಸಂಚಾಲಕ ರಮೇಶ್ ಕೋಟ್ಯಾನ್‌ ಹಾಗೂ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT