ADVERTISEMENT

ಪಾನಮತ್ತ‌ ಎಂಜಿನಿಯರ್ ಚಲಾಯಿಸುತ್ತಿದ್ದ ಕಾರು ಡಿಕ್ಕಿ; ಪಾದಚಾರಿ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 9:05 IST
Last Updated 29 ಮಾರ್ಚ್ 2021, 9:05 IST
ಮೃತ ವ್ಯಕ್ತಿ
ಮೃತ ವ್ಯಕ್ತಿ   

ಮಂಗಳೂರು: ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಚಲಾಯಿಸಿದಕಾರು ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿಯೊಬ್ಬರುಸ್ಥಳದಲ್ಲೇ ಮೃತಪಟ್ಟಿರುವ ದುರಂತನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನುಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ.

ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಅವರನ್ನು ಬಂಧಿಸಲಾಗಿದೆ.

ADVERTISEMENT

ಭಾನುವಾರ ರಾತ್ರಿ 9.53ಕ್ಕೆ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಆನಂದ ಸುಮಾರು ದೂರದವರೆಗೆ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.