ADVERTISEMENT

ಭೂಕಂಪ: ಸಹಾಯವಾಣಿ ಆರಂಭ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 4:34 IST
Last Updated 29 ಜೂನ್ 2022, 4:34 IST

ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಲಘು ಭೂ ಕಂಪ ಸಂಭವಿಸಿದ ಕಾರಣ ತುರ್ತು ಸಂದರ್ಭದಲ್ಲಿ ಕರೆ ಮಾಡಲು ತಾಲ್ಲೂಕು ಆಡಳಿತ ಸಹಾಯವಾಣಿ ಆರಂಭಿಸಿದೆ.

ತುರ್ತು ಸಂದರ್ಭದಲ್ಲಿ ಬುಧವಾರ ಈ ಸಂಖ್ಯೆಗೆ ಕರೆ ಮಾಡಬಹದು ಎಂದು ತಹಶೀಲ್ದಾರ್ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ.
ತಾಲ್ಲೂಕು ಕಚೇರಿ ಸಹಾಯವಾಣಿ ಮೊ.9449318532, ತಾಲ್ಲೂಕು ಸಹಾಯವಾಣಿ 9741482601ಗೆ ಕರೆ ಮಾಡಬಹುದು. ಗುರುವಾರದಿಂದ ಅಧಿಕೃತ ಸಹಾಯವಾಣಿ ಸಂಖ್ಯೆ ಪ್ರಕಟಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಮನೆಗೆ ಹಾನಿ ಅಥವಾ ಯಾವುದಾದರೂ ತುರ್ತು ಸಂದರ್ಭದಲ್ಲಿ ಕಲ್ಲುಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಂಪಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.