ಸುಬ್ರಹ್ಮಣ್ಯ: ಸುಬ್ರಹ್ಮಣ್ಯ -ಗುಂಡ್ಯ ರಾಜ್ಯ ಹೆದ್ದಾರಿಯ ಸುಬ್ರಹ್ಮಣ್ಯ ಸಮೀಪದ ಕೊಂಬಾರು ಗ್ರಾಮದ ಅನಿಲ ಎಂಬಲ್ಲಿ ಭಾನುವಾರ ಹಗಲಿನ ವೇಳೆ ರಸ್ತೆಯಲ್ಲಿ ಕಾಡಾನೆ ಸಂಚರಿಸಿದ್ದನ್ನು ಕಂಡು ಪ್ರಯಾಣಿಕರು ಭಯಭೀತರಾದರು.
ಒಂಟಿ ಆನೆಯು ಹೆದ್ದಾರಿ ದಾಟುವ ವೇಳೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎನ್ನಲಾಗಿದೆ. ಈ ರಸ್ತೆಯ ಮೂಲಕ ತೆರಳುವವರು ಎಚ್ಚರಿಕೆ ವಹಿಸ
ಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.