ADVERTISEMENT

ಧರ್ಮಸ್ಥಳ ಯೋಜನೆಯಿಂದ ಶಕ್ತಿ 

ಕರ್ನೂರಿನಲ್ಲಿ ನಡೆದ ‘ಆಟಿಟೊಂಜಿ’ ದಿನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:21 IST
Last Updated 12 ಆಗಸ್ಟ್ 2025, 7:21 IST
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ಸರ್ಕಾರಿ ಶಾಲೆಯಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ‌ಶಶಿಧರ್ ಉದ್ಘಾಟಿಸಿದರು
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ಸರ್ಕಾರಿ ಶಾಲೆಯಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ‌ಶಶಿಧರ್ ಉದ್ಘಾಟಿಸಿದರು   

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಒಂದು ಪ್ರೇರಣಾ ಶಕ್ತಿಯಾಗಿದೆ. ದುರ್ಬಲ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮಹತ್ಕಾರ್ಯ ಯೋಜನೆಯ ಮೂಲಕ ಆಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲ್ಲೂಕು ಯೋಜನಾಧಿಕಾರಿ ಶಶಿಧರ್ ಹೇಳಿದರು.

ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ಸರ್ಕಾರಿ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕರ್ನೂರು ಒಕ್ಕೂಟದಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರ್ನೂರು ಒಕ್ಕೂಟದ ಅಧ್ಯಕ್ಷೆ ಆಶಾಲತಾ ರೈ ಅವರು ದೀಪ ಬೆಳಗಿಸಿದರು.

ADVERTISEMENT

ನೆಟ್ಟಣಿಗೆ ಮುಡ್ನೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮೀನಾಕ್ಷಿ ಅವರು ಮಾಹಿತಿ ನೀಡಿದರು.

ಒಕ್ಕೂಟದ ಉಪಾಧ್ಯಕ್ಷ ಸುಬ್ಬಣ್ಣ ರೈ, ಯೋಜನೆಯ ವಲಯ ಮೇಲ್ವಿಚಾರಕ ಹರೀಶ್ ಕುಲಾಲ್ ಅರಿಯಡ್ಕ, ವಲಯಾಧ್ಯಕ್ಷ ದಿನೇಶ್ ರೈ ಕುತ್ಯಾಳ ಕಾನ, ಯೋಜನೆಯ ಈಶ್ವರಮಂಗಲ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಗಾಯತ್ರಿ ಕೆ.ಎಸ್., ಕರ್ನೂರು ಒಕ್ಕೂಟದ ಕಾರ್ಯದರ್ಶಿ ಪ್ರಮೀಳಾ ರೈ, ಜತೆ ಕಾರ್ಯದರ್ಶಿ ವೀಣಾ ಕರ್ನೂರು, ನಮ್ಮ ಸೇವಾ ಕೇಂದ್ರದ ಬಿಎಲ್ಇ ಸಂಧ್ಯಾ ಭಾಗವಹಿಸಿದ್ದರು.

ಒಕ್ಕೂಟದ ಸದಸ್ಯ ಜಯಂತ ರೈ ಸ್ವಾಗತಿಸಿದರು. ಕರ್ನೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಸುಮ ರೈ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.