ADVERTISEMENT

ಮೆದುಳು ನಿಷ್ಕ್ರಿಯಗೊಂಡ ಮಹಿಳೆ ಅಂಗಾಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 6:26 IST
Last Updated 23 ಏಪ್ರಿಲ್ 2022, 6:26 IST
ಪ್ರೀತಿ ಮನೋಜ್
ಪ್ರೀತಿ ಮನೋಜ್   

ಮಂಗಳೂರು: ಏ.9ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೆದುಳು ನಿಷ್ಕ್ರಿಯ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಮಹಿಳೆಯ ಕುಟುಂಬದವರು ಅಂಗಾಂಗ ದಾನ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ (47) ಅವರು ಏ.9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯು ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ರಸ್ತೆಯ ವಿಭಜಕವನ್ನು ದಾಟಿ, ಮತ್ತೊಂದು ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರಿ ಮಾಡುತ್ತಿದ್ದ ಪ್ರೀತಿ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಶನಿವಾರ ವೈದ್ಯರು ಖಚಿತಪಡಿದ್ದಾರೆ.

ಬಿಎಂಡಬ್ಲ್ಯು ಕಾರು ಚಾಲಕ ಮಣ್ಣಗುಡ್ಡೆಯ ಉದ್ಯಮಿ ಶ್ರವಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.