ADVERTISEMENT

ಕಾರ್ಕಳ: ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 13:47 IST
Last Updated 14 ಸೆಪ್ಟೆಂಬರ್ 2022, 13:47 IST
   

ಕಾರ್ಕಳ: ತಾಲ್ಲೂಕಿನ ದುರ್ಗಾ ಗ್ರಾಮದ ನೆಲೆಬೆಟ್ಟುವಿನಲ್ಲಿ ಸಾಲದ ಬಾಧೆ ತಾಳಲಾರದೆ ಭಾಸ್ಕರ್ ಹೆಗ್ಡೆ ಎಂಬುವರು ಬುಧವಾರ ಬೆಳಿಗ್ಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜಕೀಯ ಹಾಗೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಭಾಸ್ಕರ್ ಹೆಗ್ಡೆ ಸಾಲ ಮಾಡಿಕೊಂಡಿದ್ದರು. ಸಾಲದ ಹೊರೆ ಹೆಚ್ಚಾಗಿದ್ದರಿಂದ ಮನನೊಂದು ಕಾಡು ಪ್ರಾಣಿಗಳಿಂದ ಬೆಳೆ ರಕ್ಷಣೆ ಮಾಡಿಕೊಳ್ಳಲು ಇಟ್ಟುಕೊಂಡಿದ್ದ ಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.