ಸುಳ್ಯ(ದಕ್ಷಿಣ ಕನ್ನಡ): ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ತಂದೆಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡ ಆತ್ಮಹತ್ಯೆಗೆ ಶರಣಾದವರು. ಅಪ್ಪ-ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ 18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ವೇಳೆ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ.
ಈ ವೇಳೆ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ ಗೌಡರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮಗನ ಇತ್ತೀಚಿನ ವರ್ತನೆಯಿಂದ ನೊಂದಿದ್ದ ಲಕ್ಷ್ಮಣ ಗೌಡ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಳ್ಯ ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.