ADVERTISEMENT

ಫಾಝಿಲ್ ಕೊಲೆ: ಒಬ್ಬ ಆರೋಪಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:31 IST
Last Updated 16 ಸೆಪ್ಟೆಂಬರ್ 2022, 4:31 IST
   

ಸುರತ್ಕಲ್: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಆರೋಪಿ ಬಂಟ್ವಾಳದ ಹರ್ಷಿತ್‌ಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

ಸೆ.7ರಂದು ಜಾಮೀನು ದೊರೆತಿದ್ದು, ಸೆ. 13ರಂದು ಹರ್ಷಿತ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಜುಲೈ 27ರ ರಾತ್ರಿ ಕಾರಿನಲ್ಲಿ ಬಂದ ತಂಡ ಫಾಝಿಲ್‌ ಅವರನ್ನು ಹತ್ಯೆ ಮಾಡಿತ್ತು. ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಆರೋಪಿಗಳನ್ನುತನ್ನ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗಿ ಉಳಿದು ಕೊಳ್ಳಲು ಆಶ್ರಯ ನೀಡಿದ್ದ ಆರೋಪಿದ ಮೇಲೆ ಎಂಟನೇ ಆರೋಪಿಯಾಗಿ ಹರ್ಷಿತ್‌ನನ್ನು ಪೊಲೀಸರು ಆಗಸ್ಟ್‌ 17ರಂದು ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.