ADVERTISEMENT

ಬೆಳ್ತಂಗಡಿ | ಬೆಂಕಿ: ರಬ್ಬರ್ ಕೃಷಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 12:23 IST
Last Updated 21 ಮಾರ್ಚ್ 2024, 12:23 IST
ಬಜಿರೆ ಗ್ರಾಮದ ವಿಶ್ವನಾಥ ಪೂಜಾರಿ ಎಂಬುವರ ರಬ್ಬರ್ ತೋಟಕ್ಕೆ ಬಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಿಯಂತ್ರಿಸಿದರು
ಬಜಿರೆ ಗ್ರಾಮದ ವಿಶ್ವನಾಥ ಪೂಜಾರಿ ಎಂಬುವರ ರಬ್ಬರ್ ತೋಟಕ್ಕೆ ಬಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಿಯಂತ್ರಿಸಿದರು   

ಬೆಳ್ತಂಗಡಿ: ತಾಲ್ಲೂಕಿನ ಬಜಿರೆ ಗ್ರಾಮದ ವಿಶ್ವನಾಥ ಪೂಜಾರಿ ಎಂಬುವರ ರಬ್ಬರ್ ತೋಟಕ್ಕೆ ಬುಧವಾರ ಬೆಂಕಿ ಬಿದ್ದು, ಸುಮಾರು ಅರ್ಧ ಎಕರೆ ರಬ್ಬರ್ ಕೃಷಿ ಸಂಪೂರ್ಣ ಹಾನಿಯಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿಯ ಖಾಸಗಿ ಕಾಲೇಜೊಂದರ ಹಿಂಭಾಗದಲ್ಲಿ ಖಾಸಗಿಯವರ ಒಡೆತನದ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಹೆಚ್ಚಿನ ಪ್ರಮಾಣದ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಕಾರದಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.