ಮಂಗಳೂರು: ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ ಬಿದ್ದಿದ್ದು, ವರ್ತಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿದ್ದ ಉಳ್ಳಾಲದ ಬಜರಂಗದಳ- ವಿಹಿಂಪ, ಅವುಗಳ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು.
ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.