ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.
ಬೋಟ್ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೋಟ್ನಲ್ಲಿ 20 ಮೀನುಗಾರರಿದ್ದು, 16 ಮಂದಿ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.