ADVERTISEMENT

ಪಿಡಿಒ ಮೇಲೆ ಹಲ್ಲೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 27 ಮೇ 2021, 8:19 IST
Last Updated 27 ಮೇ 2021, 8:19 IST

ಮಂಗಳೂರು: pdo

ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್‌‌. ಶಶಿಕುಮಾರ, 'ಮೊಹಮ್ಮದ್ ಇರಾಯತುಲ್ಲಾ, ಫರಂಗಿಪೇಟೆ ನಿವಾಸಿ ಅಹ್ಮದ್ ಬಸೀರ್, ಕುತ್ತಾರ್ ನಿವಾಸಿ ಅಬೂಬಕ್ಕರ್ ಸಿದ್ದಿಕೂರ್, ಅಬ್ದುಲ್ ಸಿದ್ದಿಕ್ ಎಂಬುವವರನ್ನು ಬಂಧಿಸಲಾಗಿದೆ' ಎಂದರು.
ಇನ್ನೊಬ್ಬ ಆರೋಪಿ ಮನ್ಸೂರ್ ಅಲಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೇ 25ರಂದು ಪಿಡಿಒ ರಾಜೇಂದ್ರ ಶೆಟ್ಟಿ ಅವರು ಗ್ರಾಮ ಪಂಚಾಯಿತಿ ಕಚೇರಿಯ ಸಮೀಪದಲ್ಲಿದ್ದ ಐದು ಮಂದಿ ಯುವಕರಿಗೆ ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹೇಳಿದ್ದರು. ಆದರೆ ಆ ಯುವಕರ ತಂಡ ಆಕ್ಷೇಪ ವ್ಯಕ್ತಪಡಿಸಿ ಪಿಡಿಒ ಮೇಲೆ ಹಲ್ಲೆ ನಡೆಸಿತ್ತು.
ಆರೋಪಿ ಮಹಮ್ಮದ್ ಇದಾಯತುಲ್ಲಾ ಮತ್ತು ಅಹ್ಮದ್‌ ಬಸೀರ್‌ ವಿರುದ್ಧ ಈಗಾಗಲೇ ಮಂಗಳೂರು ಗ್ರಾಮಾಂತರ ಠಾಣೆ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಠಾಣೆಯಲ್ಲಿ ಅನೇಕ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.