ADVERTISEMENT

ಮಂಜೇಶ್ವರ: ಒಂದೇ ಕುಟುಂಬದ ನಾಲ್ವರ ಕೊಲೆ

ಸ್ವಂತ ಅಕ್ಕನ ಮಗನಿಂದಲೇ ಕೃತ್ಯ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 5:15 IST
Last Updated 4 ಆಗಸ್ಟ್ 2020, 5:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕನ್ಯಾಲದಲ್ಲಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.

ಸುದಂಬಲ ನಿವಾಸಿ ಉದಯ (40) ಕೃತ್ಯ ಎಸಗಿರುವ ಆರೋಪಿ. ತನ್ನ ತಾಯಿಯ ತಮ್ಮಂದಿರಾದ ಸದಾಶಿವ (54), ವಿಠಲ (52), ಬಾಬು (50) ಮತ್ತು ತಾಯಿಯ ಸಹೋದರಿ ದೇವಕಿ (58) ಅವರನ್ನು ಕೊಲೆ ಮಾಡಿದ್ದಾನೆ. ಕೇರಳ– ಕರ್ನಾಟಕ ಗಡಿಯಲ್ಲಿರುವ ಬಾಯಾರು ಸಮೀಪದ ಕನ್ಯಾಲದಲ್ಲಿ ಸೋಮವಾರ ರಾತ್ರಿ 7.30ರ ಸುಮಾರಿಗೆ ಕೃತ್ಯ ನಡೆದಿದೆ.

ಕುಟುಂಬ ಕಲಹಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದು, ಆರೋಪಿ ಕೊಲೆ ಮಾಡಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾಸರಗೋಡು ಡಿವೈಎಸ್‌ಪಿ ಬಾಲಕೃಷ್ಣನ್‌ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಪೊಲೀಸರು, ಆರೋಪಿ ಉದಯನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾನಸಿಕ ಅಸ್ವಸ್ಥ ಎಂಬ ಮಾಹಿತಿಯನ್ನು ಆತನ ಕುಟುಂಬದವರು ಮತ್ತು ಸ್ಥಳೀಯರು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.