ಮಂಗಳೂರು: ನಗರದ ಪರಾರಿಯಲ್ಲಿ ಇರುವ ಹೆಂಚು ಕಾರ್ಖಾನೆಯ ಆವರಣದ ಚರಂಡಿಯಲ್ಲಿ 8 ವರ್ಷದ ಬಾಲಕಿಯ ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಬಾಲಕಿಯ ಪಾಲಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ಪುತ್ರಿ ಸಂಜೆ ಕಾಣೆಯಾಗಿದ್ದಳು. ಹುಡುಕಾಟ ನಡೆಸಿದಾಗ, ಚರಂಡಿಯಲ್ಲಿ ಶವ ಪತ್ತೆಯಾಗಿದೆ.
ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ಎಸಗಿರಬಹುದು ಎಂದು ಮಗುವಿನ ಪಾಲಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯಲ್ಲಿ 19 ಕಾರ್ಮಿಕರಿದ್ದು, ಬಹುತೇಕ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.