ADVERTISEMENT

ರಕ್ತಕಣಗಳ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 13:44 IST
Last Updated 21 ಜೂನ್ 2021, 13:44 IST
ದೃತಿ
ದೃತಿ   

ಬೆಳ್ತಂಗಡಿ: ಬಿಳಿ ರಕ್ತಕಣಗಳ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮಸ್ಥಳ ಗ್ರಾಮದ ಅಗುಳೆಬೈಲು ನಿವಾಸಿ ದಿನೇಶ್ ಮತ್ತು ಭಾರತಿ ದಂಪತಿಯ ಪುತ್ರಿ ದೃತಿ (6) ಸೋಮವಾರ ಸಾವನ್ನಪ್ಪಿದ್ದಾಳೆ.

ಬಾಲಕಿಗೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಿಂದ ಚಿಕಿತ್ಸೆ ನಡೆಯುತ್ತಿತ್ತು.

ಬಾಲಕಿಯ ಹೆಚ್ಚಿನ ಚಿಕಿತ್ಸೆಗೆ ಸುಮಾರು ₹ 25 ಲಕ್ಷ ಖರ್ಚುಗಳಾಗಬಹುದು ಎಂದು ಬೆಂಗಳೂರಿನ ಆಸ್ಪತ್ರೆಯ ವೈದ್ಯರು ತಿಳಿಸಿದ್ದರಿಂದ ಅಷ್ಟೊಂದು ಮೊತ್ತವನ್ನು ಹೊಂದಿಸಲು ಕುಟುಂಬ ಒದ್ದಾಡುತ್ತಿತ್ತು. ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೆರವನ್ನು ಯಾಚಿಸಿದ್ದರು. ಹಲವು ದಾನಿಗಳು ಮತ್ತು ಸಂಘಸಂಸ್ಥೆಗಳು ನೆರವನ್ನು ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.