ಸಚಿವ ಸುರೇಶ್ ಬಿ.ಎಸ್
ಮಂಗಳೂರು: 19ನೇ ರಾಷ್ಟ್ರೀಯ ಹಿರಿಯರ ಈಜು ಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಿಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ.
ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ‘ಮಂಗಳೂರು ನಗರವನ್ನು ಪ್ರವಾಸಿ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಸಂಸದರು, ಶಾಸಕರು, ಮಹಾನಗರ ಪಾಲಿಕೆ ಸದಸ್ಯರು ಸೇರಿ ಯೋಜನೆ ರೂಪಿಸಿ, ಸರ್ಕಾರಕ್ಕೆ ಸಲ್ಲಿಸಿದರೆ, ನಗರಾಭಿವೃದ್ಧಿ ಇಲಾಖೆಯಿಂದ ₹50 ಕೋಟಿ ಅನುದಾನ ಒದಗಿಸಲಾಗುವುದು. ಮಂಗಳೂರು ನಗರದ ಅಭಿವೃದ್ಧಿಗೆ ಸಂಬಂಧಿಸಿ ಪಾಲಿಕೆಗೆ ಶೀಘ್ರದಲ್ಲಿ ₹25 ಕೋಟಿ ಬಿಡುಗಡೆ ಮಾಡಲಾಗುವುದು’ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಪಮೇಯರ್ ಸುನೀತಾ, ಪಾಲಿಕೆಯಲ್ಲಿ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಅಬ್ದುಲ್ ಲತೀಫ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ., ಪಾಲಿಕೆ ಆಯುಕ್ತ ಆನಂದ ಸಿ.ಎಲ್., 19ನೇ ರಾಷ್ಟ್ರೀಯ ಹಿರಿಯರ ಈಜು ಸ್ಪರ್ಧೆಯ ಕಾರ್ಯನಿರ್ವಾಹಕ ಅಧ್ಯಕ್ಷ ತೇಜೋಮಯ ಇದ್ದರು.
ಈಜುಪಟು ಎಂ.ಆರ್. ಮೋಹಿತೆ, ಗುತ್ತಿಗೆದಾರ ಉದ್ರಾ ಕನ್ಸ್ಟ್ರಕ್ಷನ್ಸ್ನ ಅಧ್ಯಕ್ಷ ಸಿಬಾ ಪ್ರಸಾದ್, ಯೋಜನಾ ನಿರ್ದೇಶಕ ಪುನೀತ್ ಟಿ.ಪಿ ಅವರನ್ನು ಸನ್ಮಾನಿಸಲಾಯಿತು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು ಕೆ ಸ್ವಾಗತಿಸಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.