ಬೆಳ್ತಂಗಡಿ: ಗುಬ್ಬಚ್ಚಿಗಳನ್ನು ಸಂರಕ್ಷಿಸುವ ಉದ್ದೇಶದದಿಂದ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ ತಾಲ್ಲೂಕಿನಾದ್ಯಂತ ನಡೆಯುತ್ತಿದೆ.
ಇದರ ಮೊದಲ ಕಾರ್ಯಕ್ರಮವಾಗಿ ಮಿತ್ತಬಾಗಿಲು ಗ್ರಾಮದ ಪತ್ರಿಕಾ ವಿತರಕರಾದ ವಾಸುದೇವ ರಾವ್, ಸುಮತಿ ದಂಪತಿಗೆ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರದ ಸಂಚಾಲಕಿ ರಮ್ಯ ಅವರು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ, ನೀರಿಡುವ ಅವಶ್ಯಕತೆ ಮತ್ತು ನೀರಿಡುವ ಕ್ರಮವನ್ನು ವಿವರಿಸಿದರು.
ಗುಬ್ಬಚ್ಚಿಗೂಡು ಕಾರ್ಯಾಗಾರದ ರೂವಾರಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.