ADVERTISEMENT

ಪ್ರಾಧ್ಯಾಪಕಿಗೆ ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 16:10 IST
Last Updated 26 ಏಪ್ರಿಲ್ 2022, 16:10 IST

ಮಂಗಳೂರು: ಬಂಟ್ವಾಳದ ಕಾಲೇಜೊಂದರ ಪ್ರಾಧ್ಯಾಪಕಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆನ್ಯಾಯಾಲಯ ಜಾಮೀನು ನೀಡಿದೆ.

ಕಾಲೇಜಿನ ಸಂಚಾಲಕ, ಬಂಟ್ವಾಳ ಸಿದ್ಧಕಟ್ಟೆ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಕ್ರೀಡಾ ತರಬೇತಿದಾರ ಹೆಬ್ರಿ ನಾಡ್ಪಾಲು ನಿವಾಸಿ ತಾರಾನಾಥ ಬಿ.ಎಸ್.ಶೆಟ್ಟಿಗೆ ನ್ಯಾಯಾಲಯ ಜಾಮೀನು ನೀಡಿದೆ. ಪ್ರಮುಖ ಆರೋಪಿ ಕಾಲೇಜಿನ ಸಂಚಾಲಕ ಬೆಳ್ತಂಗಡಿಯ ಲಾಯಿಲ ನಿವಾಸಿ ಪ್ರಕಾಶ್ ಶೆಣೈಗೆ ನ್ಯಾಯಾಲಯ ಕಳೆದ ಶುಕ್ರವಾರ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT