ADVERTISEMENT

ಹೆಡ್ ಕಾನ್ ಸ್ಟೆಬಲ್ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 9:46 IST
Last Updated 16 ಡಿಸೆಂಬರ್ 2020, 9:46 IST

ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್ ಮೇಲೆ ದುಷ್ಕರ್ಮಿಯೋರ್ವತಲವಾರು ಬೀಸಿದ‌ ಘಟನೆ ಮಂಗಳೂರಿನಲ್ಲಿ‌ ನಡೆದಿದೆ.

ಬಂದರ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಗಣೇಶ ಕಾಮತ್ ತಲವಾರು ಹಲ್ಲೆಗೊಳಗಾದ ಪೊಲೀಸ್. ಘಟನೆಯು ನಗರದ ರಥಬೀದಿ ಸಮೀಪದ ಚಿತ್ರಮಂದಿರವೊಂದರ ಬಳಿ‌ ನಡೆದಿದೆ.

ಹೆಡ್‌ಕಾನ್‌ಸ್ಟೇಬಲ್ ಗಣೇಶ ಇಬ್ಬರು ಸಿಬ್ಬಂದಿ ಜೊತೆ ವಾಹನಗಳ ತಪಾಸಣೆಯಲ್ಲಿ‌ ನಿರತರಾಗಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯಪೇದೆ ಗಣೇಶ ಕಾಮತ್‌ಗೆ ತಲವಾರಿನಿಂದ ಹಲ್ಲೆ ಗೈದಿದ್ದಾನೆ.

ADVERTISEMENT

ಕಾಮತ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳಕ್ಕೆ ಮಂಗಳೂರು ಉತ್ತರ (ಬಂದರ್) ಪೊಲೀಸರು‌ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.