ADVERTISEMENT

ದಕ್ಷಿಣ ಕನ್ನಡದಲ್ಲಿ ‌ಮುಂದುವರಿದ‌ ಮಳೆ: ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 6:35 IST
Last Updated 17 ಜುಲೈ 2020, 6:35 IST
ಹಾನಿಗೊಂಡ ಮನೆಯ ಎದುರು ನಿಂತಿರುವ ಸಂತ್ರಸ್ತ
ಹಾನಿಗೊಂಡ ಮನೆಯ ಎದುರು ನಿಂತಿರುವ ಸಂತ್ರಸ್ತ    
""

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕಾಗಿದ್ದು, ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ನಗರವೂ‌‌ ಸೇರಿದಂತೆ‌ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಿಂದ‌ ಮನೆಗಳಿಗೆ ಹಾನಿಯಾಗಿದೆ. ಬೊಂಡಂತಿಲ,‌ ಜಾಲ್ಸೂರು, ಬಜ್ಪೆ ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.

ತಗ್ಗು‌ ಪ್ರದೇಶಗಳಲ್ಲಿ ನೀರು‌ ನುಗ್ಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಆಗುತ್ತಿದೆ. ಕಡಲ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದೆ.

ಭಾರತೀಯ ಹವಾಮಾನ ಇಲಾಖೆಯು ಜುಲೈ 19 ಹಾಗೂ 20 ರಂದು ಆರೆಂಜ್‌ ಅಲರ್ಟ್ ಘೋಷಿಸಿದೆ. ಶುಕ್ರವಾರ ಹಾಗೂ ಶನಿವಾರ ಎಲ್ಲೋ ಅಲರ್ಟ್ ಘೋಷಿಲಾಗಿದೆ. ಗುರುವಾರದಿಂದಲ್ಲೇ ನಿರಂತರವಾಗಿ ಮಳೆ ಸುರಿಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.