ಮಂಗಳೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು–ಸಿಡಿಲು ಸಹಿತ ಮಳೆ ಸುರಿಯಿತು.
ಬಂಟ್ವಾಳ ಹಾಗೂ ಮಂಗಳೂರು ತಾಲ್ಲೂಕಿನಲ್ಲಿ ಸಂಜೆ ಗಾಳಿಯೊಂದಿಗೆ ಕೆಲ ಹೊತ್ತು ಮಳೆ ಸುರಿಯಿತು. ಪುತ್ತೂರು, ಸುಳ್ಯ, ಬೆಳ್ತಂಗಡಿಯ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಧಗೆಯಲ್ಲಿ ಬೆಂದಿದ್ದ ಕರಾವಳಿಯಲ್ಲಿ ಸಂಜೆಯ ಅಕಾಲಿಕ ಮಳೆಯು ತಂಪು ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.