ADVERTISEMENT

ಮಂಗಳೂರು: ಜೋರಾದ ಮಳೆ: ಲಘು ಭೂಕುಸಿತ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 6:47 IST
Last Updated 10 ಜುಲೈ 2019, 6:47 IST
   

ಮಂಗಳೂರು: ಮಂಗಳವಾರ ಸಂಜೆಯಿಂದ ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಮಂಗಳೂರು ನಗರದ ಆಕಾಶಭವನದಲ್ಲಿ ಲಘು ಭೂಕುಸಿತ ಸಂಭವಿಸಿ ಮನೆಗೆ ಹಾನಿಯಾಗಿದೆ.

ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯದ ಮೇಲೆ ಮರ ಉರುಳಿ ವಿದ್ಯಾರ್ಥಿಗೆ ಗಾಯವಾಗಿದೆ.

ಆಕಾಶಭವನದಲ್ಲಿ ಬುಧವಾರ ಬೆಳಿಗ್ಗೆ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದಿದೆ. ಮಹಾನಗರ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.

ADVERTISEMENT

ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯದ ಮೇಲೆ ಮರವೊಂದು ಉರುಳಿಬಿದ್ದು, ಶೌಚಾಲಯದ ಕಟ್ಟಡಕ್ಕೆ ಹಾನಿಯಾಗಿದೆ. ಮರ ಬೀಳುವಾಗ ವಿದ್ಯಾರ್ಥಿಗಳು ಶೌಚಾಲಯದ ಬಳಿಯಲ್ಲೇ ಇದ್ದರು. ಒಬ್ಬ ವಿದ್ಯಾರ್ಥಿಗೆ ಗಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.