ADVERTISEMENT

ಸುಳ್ಯದಲ್ಲಿ ಧಾರಾಕಾರ ಮಳೆ: ರಸ್ತೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 5:57 IST
Last Updated 2 ಸೆಪ್ಟೆಂಬರ್ 2022, 5:57 IST
ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮಹಾಲಿಂಗೇಶ್ವರ ದೇವಸ್ಥಾನದ ಆವರಣ ಜಲಾವೃತವಾಗಿರುವುದು
ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮಹಾಲಿಂಗೇಶ್ವರ ದೇವಸ್ಥಾನದ ಆವರಣ ಜಲಾವೃತವಾಗಿರುವುದು   

ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನಾದ್ಯಂತ ಗುರುವಾರ ಸಂಜೆ ಧಾರಾಕಾರ ಮಳೆಯಾಗಿದೆ. ಎರಡು ಗಂಟೆ ನಿರಂತರವಾಗಿ ಸುರಿದ ಮಳೆಯಿಂದ ಕೆಲವು ಕಡೆ ರಸ್ತೆಗಳು ಜಲಾವೃತವಾಗಿವೆ.

ದುಗ್ಗಲಡ್ಕ- ದೊಡ್ಡತೋಟ ರಸ್ತೆಯು ಸಂಪೂರ್ಣ ಜಲಾವೃತವಾಗಿ ಕೆಲ ಹೊತ್ತು ವಾಹನಗಳ ಸಂಚಾರ ಸ್ಥಗಿತವಾಗಿತ್ತು. ನೆರೆ ನೀರು ಇಳಿಕೆಯಾದ ಬಳಿಕ ವಾಹನಗಳು ಸಂಚರಿಸಿದವು.

ಬೆಳ್ಳಾರೆಯ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ನೆರೆ ನೀರು ನುಗ್ಗಿದೆ. ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಹಲವು ಅಂಗಡಿಗಳಿಗೂ ನೀರು ನುಗ್ಗಿ, ನಷ್ಟ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.