ಮಂಗಳೂರು: ಭಾರಿ ಮಳೆ ಮುನ್ಸೂಚನೆ ಕಾರಣ ಜುಲೈ1ರಂದು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜುಗಳಿಗೆ ಜಿಲ್ಲಾ ಆಡಳಿತ ರಜೆ ಘೋಷಿಸಿದೆ.
ಹವಾಮಾನ ಇಲಾಖೆ ಶುಕ್ರವಾರ (ಜುಲೈ.1) ಬೆಳಿಗ್ಗೆ 8.30ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:ಮಂಗಳೂರು: 50 ವರ್ಷಗಳಲ್ಲಿ ಲಘು ಭೂಕಂಪನ ಹೆಚ್ಚಳ, ಸಮುದ್ರದ ಹಿಗ್ಗುವಿಕೆಯೂ ಕಾರಣ
ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.