ಹೆಲಿಕಾಪ್ಟರ್ನಿಂದ ಹೂಮಳೆ
ಮಂಗಳೂರು: ಇಲ್ಲೊಬ್ಬರು ಉದ್ಯಮಿ ತನ್ನ ಪತ್ನಿ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಆಕೆಯ ಮೇಲೆ ಹೆಲಿಕಾಪ್ಟರ್ನಿಂದ ಹೂಮಳೆಗೆರೆಯುವ ಮೂಲಕ ವಿಶೇಷ ಉಡುಗೊರೆ ನೀಡಿದರು.
ನಗರದ ಹೊರವಲಯದ ‘ಅಡ್ಯಾರ್ ಗಾರ್ಡನ್’ನಲ್ಲಿ ಉದ್ಯಮಿ ಪ್ರಕಾಶ್ ಕುಂಪಲ ಅವರ ಪತ್ನಿ ಅರ್ಪಿತಾ ಅವರ ಸೀಮಂತ ಸಮಾರಂಭ ಗುರುವಾರ ಏರ್ಪಡಾಗಿತ್ತು. ಈ ಸಮಾರಂಭಕ್ಕೆ ಬಂದವರಿಗೆಲ್ಲ ಅಚ್ಚರಿ ಕಾದಿತ್ತು.
ಸೀಮಂತದ ಶಾಸ್ತ್ರಗಳು ನಡೆದ ಬಳಿಕ ಆಗಸದಲ್ಲಿ ದಿಢೀರ್ ಹೆಲಿಕಾಪ್ಟರ್ ಕಾಣಿಸಿಕೊಂಡಿತು. ನೋಡುತ್ತಿದ್ದಂತೆಯೇ ಆ ಹೆಲಿಕಾಪ್ಟರ್ನಿಂದ ಅರ್ಪಿತಾ ಅವರ ಮೇಲೆ ಹೂಮಳೆ ಸುರಿಸಲಾಯಿತು.
‘ಅರ್ಪಿತಾ ಅವರಿಗಾಗಲೀ ಬಂಧುಗಳಿಗಾಗಲಿ ಈ ವಿಚಾರ ಮೊದಲು ಗೊತ್ತೇ ಇರಲಿಲ್ಲ. ಪತಿ ನೀಡಿದ ಅಚ್ಚರಿಯ ಉಡುಗೊರೆಯಿಂದ ಅರ್ಪಿತಾ ಮಾತ್ರವಲ್ಲ ಸಮಾರಂಭಕ್ಕೆ ಬಂದವರೂ ಸಂಭ್ರಮಪಟ್ಟರು’ ಎಂದು ಪ್ರಕಾಶ್ ಕುಂಪಲ ಅವರ ಬಂಧುವೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಕಾಶ್ ಕುಂಪಲ ಅವರು ಅರ್ಪಿತಾ ಅವರನ್ನು 2019ರಲ್ಲಿ ಮದುವೆಯಾಗಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.