ADVERTISEMENT

ಉಪ್ಪಿನಂಗಡಿ: ಹೈಕೋರ್ಟ್‌ ಆದೇಶ, ಅಕ್ರಮ ಗೇಟ್‌ ತೆರವು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 14:02 IST
Last Updated 21 ಏಪ್ರಿಲ್ 2025, 14:02 IST
ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಮೀಸಲಿಸಿರಿಸಿದ್ದ ಭೂಮಿಗೆ ಅನಧಿಕೃತವಾಗಿ ಅಳವಡಿಸಿದ್ದ ಗೇಟನ್ನು ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು
ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಮೀಸಲಿಸಿರಿಸಿದ್ದ ಭೂಮಿಗೆ ಅನಧಿಕೃತವಾಗಿ ಅಳವಡಿಸಿದ್ದ ಗೇಟನ್ನು ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು   

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಿರಾಳ ಎಂಬಲ್ಲಿನ ಸರ್ಕಾರಿ ಭೂಮಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮೀಸಲಿಸಿರಿಸಿದ್ದ ಭೂಮಿಗೆ ಅನಧಿಕೃತವಾಗಿ ಅಳವಡಿಸಿದ್ದ ಗೇಟನ್ನು ಪೊಲೀಸ್ ರಕ್ಷಣೆಯೊಂದಿಗೆ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು.

ಅಜಿರಾಳ ಎಂಬಲ್ಲಿನ ಸರ್ವೆ ನಂಬ್ರ 104/1ಎ/1ಎ/ಪಿ1ರಲ್ಲಿನ 0.45 ಎಕರೆಯನ್ನು ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಕಾಯ್ದಿರಿಸಿ ಜಿಲ್ಲಾಧಿಕಾರಿ 2016ರ ಏ.22ರಂದು ಆದೇಶಿಸಿದ್ದರು. ಈ ಬಗ್ಗೆ ಸರೋಜಾ ಎಂಬುವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ದಾವೆಯ ವಿಚಾರಣೆ ನಡೆಸಿದ ನ್ಯಾಯಾಲಯವು ಸರೋಜಾ ಸಲ್ಲಿಸಿದ್ದ ದಾವೆಯನ್ನು 2024ರ ಅ.30ರಂದು ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT