ADVERTISEMENT

ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 9:20 IST
Last Updated 27 ಜುಲೈ 2022, 9:20 IST
ಪ್ರವೀಣ್ ನೆಟ್ಟಾರು: ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿರುವ ಚಿತ್ರ
ಪ್ರವೀಣ್ ನೆಟ್ಟಾರು: ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿರುವ ಚಿತ್ರ   

ಸುಳ್ಯ: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮೆರವಣಿಗೆ ನಡೆಸಲು ಸಂಘ ಪರಿವಾರದ ಸಂಘಟನೆಗಳು ಹಾಗೂ ಪ್ರವೀಣ್ ಅವರ ಬಂಧುಗಳು ನಿರ್ಧರಿಸಿದ್ದಾರೆ.

ಬುಧವಾರ ಬೆಳಗ್ಗೆ 9.30 ಕ್ಕೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲಾಗುತ್ತದೆ.

ಆ ಪ್ರಯುಕ್ತ ಇಂದು ದಕ್ಷಿಣ ಕನ್ನಡ‌ ಜಿಲ್ಲೆಯ ಪುತ್ತೂರು, ಸುಳ್ಯ ಕಡಬ ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳ ಪ್ರಮುಖರು ಕರೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.