
ಸುಳ್ಯ: ಪ್ರವೀಣ್ ಹತ್ಯೆಯಿಂದಾಗಿ ಇಲ್ಲಿ ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇದನ್ನು ತಡೆಯಲು ಯತ್ನಿಸಿದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.
ಇಲ್ಲಿನ ಸಂಘಪರಿವಾರದ ಸಂಘಟನೆಗಳ ಪ್ರಮುಖರು ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡುತ್ತಿದ್ದಾರೆ. ಸುಮಾರು 50ಕ್ಕೂ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಅಂಗಡಿ ಬಂದ್ ಮಾಡಲು ಸೂಚನೆ ನೀಡಿದರು. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಮುಚ್ಚಿವೆ. ರಥ ಬೀದಿಯಿಂದ ಗಾಂಧಿನಗರದ ಕೆಲವು ಅಂಗಡಿಗಳು ಕಾರ್ಯಚರಿಸುತ್ತಿದೆ.
ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಔಷಧ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ.
ಶಾಲೆ ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾರೆ. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.
ಇವನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.