ADVERTISEMENT

ಉಳ್ಳಾಲ: ಹಿಂದೂ ಯುವ ಸೇನೆಯ ಜಯಂತ್‌ ಕುಂಪಲ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 4:17 IST
Last Updated 4 ಸೆಪ್ಟೆಂಬರ್ 2022, 4:17 IST
ಜಯಂತ್‌ ಕುಂಪಲ
ಜಯಂತ್‌ ಕುಂಪಲ   

ಉಳ್ಳಾಲ: ಹಿಂದೂ ಯುವ ಸೇನೆಯಲ್ಲಿ ಸಕ್ರಿಯರಾಗಿದ್ದ ಜಯಂತ್ ಎಸ್‌.ಕುಂಪಲ (50) ಅವರು ಕುಂಪಲದ ಕೃಷ್ಣನಗರದಲ್ಲಿನ ಬಾಡಿಗೆ ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಯಂತ್‌ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಜಯಂತ್‌ ಅವರು ತೊಕ್ಕೊಟ್ಟಿನಲ್ಲಿ ಆಟೊರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಕುಂಪಲದ ಹನುಮಾನ್‌ ನಗರದಲ್ಲಿ ಹೊಸ ಮನೆಯನ್ನು ಕಟ್ಟಿಸುತ್ತಿದ್ದ ಅವರು ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾಗವಹಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಶುಕ್ರವಾರ ಪಾಲ್ಗೊಂಡಿದ್ದರು. ಕಾರ್ಯಕ್ರಮದಿಂದ ಮರಳುವಾಗ ಅವರ ಮೊಬೈಲ್‌ ಫೋನನ್ನು ಕಳೆದುಕೊಂಡಿದ್ದರು. ಹೊಸ ಫೋನ್‌ ಖರೀದಿಸಲು ₹ 5 ಸಾವಿರ ಸಾಲ ನೀಡುವಂತೆ ಗೆಳೆಯರನ್ನು ಕೋರಿದ್ದರು. ಈ ವಿಚಾರವಾಗಿ ಬೇಸರಗೊಂಡಿದ್ದರು. ಪತ್ನಿ ಮನೆಗೆ ಮರಳಿದಾಗ ಜಯಂತ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.