ಬೆಳ್ತಂಗಡಿ: ಹೊಸಂಗಡಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮಳೆಯೊಂದಿಗೆ ಬೀಸಿದ ಭಾರಿ ಗಾಳಿಗೆ ಹಲವೆಡೆ ಹಾನಿ ಉಂಟಾಗಿದೆ.
ದೇರಾರ್ ಶಾರದಾ ಪೂಜಾರಿ ಎಂಬುವರ ಮನೆಯ ಮೇಲೆ ತೆಂಗಿನ ಮರ ಬಿದ್ದು, ಹಾನಿ ಉಂಟಾಗಿದೆ. ಇನ್ನೊಂದು ತೆಂಗಿನ ಮರ ಬಚ್ಚಲು ಕೊಟ್ಟಿಗೆಗೆ ಬಿದ್ದು ಅದು ಧರೆಗುರುಳಿದೆ.
ಪ್ರಶಾಂತ್ ಎಂಬುವರ ಮನೆಯ 20 ಶೀಟ್ಗಳು ಗಾಳಿಗೆ ಹಾರಿ ಹೋಗಿವೆ. ಕೇಶವ ಎಂಬುವರ ಮನೆಯ ಮೇಲೆ ಅಡಿಕೆ ಮರ ಬಿದ್ದು ಹಾನಿಯಾಗಿದೆ. ಅಡಿಕೆ, ರಬ್ಬರ್ ಮರಗಳು ಮುರಿದು ಬಿದ್ದಿವೆ.
ಪಿಡಿಒ ಗಣೇಶ್ ಶೆಟ್ಟಿ, ಪ್ರಮುಖರಾದ ಧರಣೇಂದ್ರ ಕುಮಾರ್, ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್, ಸುದರ್ಶನ್ ಪಿಲಂಬು ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.