ಮಂಗಳೂರು: ಇಂಟಕ್ನಿಂದ ಸೆಪ್ಟೆಂಬರ್ 10ರವರೆಗೆ ಜಿಲ್ಲೆಯಲ್ಲಿ ಕಾರ್ಮಿಕ ಕಾರ್ಡ್ ನೋಂದಣಿ ಆಂದೋ ಲನ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಾಕೇಶ್ ಮಲ್ಲಿ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಮಿಕ ಸಂಘಟನೆ ಇಂಟಕ್ನ ಜಿಲ್ಲಾ ಸಮಿತಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕಾರ್ಡ್ ಮೂಲಕ ಸಿಗುವ ಎಲ್ಲಾ ಸವಲತ್ತುಗಳನ್ನು ಜಿಲ್ಲೆಯ ಕಾರ್ಮಿಕರಿಗೆ ಒದಗಿಸುವಲ್ಲಿ ಇಂಟಕ್ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದರು. ಅಧ್ಯಕ್ಷ ಮನೋಹರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕ್ಷೇತ್ರದ ಅಧ್ಯಕ್ಷ ದಿ. ರಾಮ್ದಾಸ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂಟಕ್ ರಾಜ್ಯ ಸಮಿತಿ ಉಪಾಧ್ಯಕ್ಷ ಸಿ.ಕೆ. ರೆಹಮಾನ್, ಜಿಲ್ಲಾ ಉಪಾಧ್ಯಕ್ಷ ವಿಜಯ್, ಪ್ರಮುಖರಾದ ಕಳ್ಳಿಗೆ ತಾರನಾಥ್ ಶೆಟ್ಟಿ, ನವೀನ್ ಡಿಸೋಜ, ಕಾರ್ಯದರ್ಶಿ ದಿನಕರ್ ಶೆಟ್ಟಿ, ಮಹಾಬಲ ಮಾರ್ಲ, ಚಿರಂಜೀವಿ ಅಂಚನ್, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಶಿಪಲ್ ರಾಜ್ ಡಿ.ಎ, ವಿಶಾಲ್ ಪೂಜಾರಿ, ಪುನೀತ್ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.