ADVERTISEMENT

ಮನೆಮನೆ ಪ್ರತಿಭಟನೆ: ಯುವಜೆಡಿಎಸ್‌ ಬೆಂಬಲ

ಎಂಆರ್‌ಪಿಎಲ್‌ ,ಬೃಹತ್‌ ಕಂಪನಿಗಳಲ್ಲಿ ತುಳುನಾಡಿನ ಯುವಕರಿಗೆ ಉದ್ಯೋಗ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 12:02 IST
Last Updated 5 ಜೂನ್ 2021, 12:02 IST
ಮಂಗಳೂರಿನ ಎಂ.ಆರ್.ಪಿ.ಎಲ್ ಸೇರಿದಂತೆ ಸ್ಥಳೀಯ ಬೃಹತ್‌ ಕಂಪನಿಗಳಲ್ಲಿ ತುಳುನಾಡಿನ ಯುವಕರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಮನೆ ಮನೆ ಪ್ರತಿಭಟನೆಗೆ ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಎಂ.ಆರ್.ಪಿ.ಎಲ್ ಸೇರಿದಂತೆ ಸ್ಥಳೀಯ ಬೃಹತ್‌ ಕಂಪನಿಗಳಲ್ಲಿ ತುಳುನಾಡಿನ ಯುವಕರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಮನೆ ಮನೆ ಪ್ರತಿಭಟನೆಗೆ ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಮಂಗಳೂರು: ಇಲ್ಲಿನ ಎಂಆರ್‌ಪಿಎಲ್‌ ಸೇರಿದಂತೆ ಕೆಲವು ಬೃಹತ್‌ ಕಂಪನಿಗಳಲ್ಲಿ ಸ್ಥಳೀಯ ತುಳುನಾಡಿನ ಯುವಕರಿಗೆ ಉದ್ಯೋಗ ದೊರೆಯಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಮನೆ ಮನೆ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಮನೆ ಮನೆ ಪ್ರತಿಭಟನಾ ಫಲಕವನ್ನು ಹಿಡಿದು ಶನಿವಾರ ಪ್ರತಿಭಟನೆ ನಡೆಸಲಾಯಿತು.‌

ಅವರು ಮಾತನಾಡಿ, ‘ಎಂಆರ್‌ಪಿಎಲ್‌ ಸೇರಿದಂತೆ ಬೃಹತ್‌ ಉದ್ದಿಮೆಗಳಲ್ಲಿ ಸ್ಥಳೀಯ ಯುವಜನರಿಗೆ ಪ್ರತಿಬಾರಿ ಅನ್ಯಾಯವಾಗುತ್ತಿದೆ. ಉತ್ತಮ ಶಿಕ್ಷಣವನ್ನು ಹೊಂದಿದ ಇಲ್ಲಿನ ಯುವಕರಿಗೆ ಕೆಲಸದಲ್ಲಿ ಅವಕಾಶ ನೀಡದೆ ಬೇರೆ ರಾಜ್ಯದವರಿಗೆ ಮನ್ನಣೆ ನೀಡಲಾಗುತ್ತಿದೆ ಇದು ಖಂಡನೀಯ. ಜಿಲ್ಲೆಯ ಸಂಸದರು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಸೂಕ್ತ ಮನ್ನಣೆ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ಯುವ ಜೆಡಿಎಸ್ ಬೃಹತ್ ಪ್ರಮಾಣದ ಹೋರಾಟವನ್ನು ನಡೆಸಲಿದೆ. ಎಲ್ಲರೂ ಕೂಡ ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಜಿಲ್ಲಾ ಯುವ ಜನತಾದಳ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪೈಝಲ್ ಮೋಹಮ್ಮದ್, ಯುವ ಜನತಾದಳದ ಮಂಗಳೂರು ಉತ್ತರ ಘಟಕಾಧ್ಯಕ್ಷ ರತೀಶ್ ಕರ್ಕೇರ , ಪ್ರದೀಪ್, ರೊಹಿತ್, ಶ್ರೀನಾಥ್ ಪೂಜಾರಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.