ADVERTISEMENT

ಬಂಟ್ವಾಳ: ಜಯಾನಂದ ಪೆರಾಜೆಗೆ ‘ಪತ್ರಕರ್ತ ಸೌರಭ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2023, 7:24 IST
Last Updated 26 ಫೆಬ್ರುವರಿ 2023, 7:24 IST
ಜಯಾನಂದ ಪೆರಾಜೆ
ಜಯಾನಂದ ಪೆರಾಜೆ   

ಬಂಟ್ವಾಳ: ಹೂವಿನಹಡಗಲಿಯ ರಾಜ್ಯ ಬರಹಗಾರರ ಸಂಘದ ವತಿಯಿಂದ ನೀಡಲಾಗುವ ‘ಪತ್ರಕರ್ತ ಸೌರಭ ಪ್ರಶಸ್ತಿ’ಗೆ ಇಲ್ಲಿನ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ.

ಜಯಾನಂದ ಪೆರಾಜೆ ಅವರು ಪತ್ರಕರ್ತರಾಗಿ, ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದಾರೆ. ರಾಜ್ಯ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ.

ಫೆ. 26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬರಹಗಾರರ ಸಂಘದ ಅಧ್ಯಕ್ಷ ಮಧು ನಾಯ್ಕ್ ಹೂವಿನಹಡಗಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.