ADVERTISEMENT

ಪತ್ರಕರ್ತರ ಸಂಘ: ನೀರಾಜೆ ಅಧ್ಯಕ್ಷ, ಕುತ್ಯಾಳ ಪ್ರಧಾನ ಕಾರ್ಯದರ್ಶಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲ್ಲೂಕು ಘಟಕಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 14:16 IST
Last Updated 5 ಡಿಸೆಂಬರ್ 2022, 14:16 IST
5ptr2
5ptr2   

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಿದ್ದೀಕ್‌ ನೀರಾಜೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ರೈ ಕುತ್ಯಾಳ ಆಯ್ಕೆಯಾಗಿದ್ದಾರೆ.

ಇಲ್ಲಿನ ಸೋಮವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಿರಣ್ ಪ್ರಸಾದ್ ಕುಂಡಡ್ಕ ಹಾಗೂ ಎಂ.ಎಸ್.ಭಟ್, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಹಾಗೂ ಮಹಮ್ಮದ್ ನಝೀರ್ ಕೊಯಿಲ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಧಾಕರ ಸುವರ್ಣ ತಿಂಗಳಾಡಿ, ಉಮಾಶಂಕರ್, ಮೇಘ ಪಾಲೆತ್ತಾಡಿ, ಐ.ಬಿ. ಸಂದೀಪ್ ಕುಮಾರ್, ಶೇಷಪ್ಪ ಕಜೆಮಾರ್, ಕುಮಾರ್ ಕಲ್ಲಾರೆ, ಕರುಣಾಕರ ರೈ ಸಿ.ಎಚ್ ಮತ್ತು ಕೃಷ್ಣ ಪ್ರಸಾದ್ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ 8 ಕಾರ್ಯಕಾರಿ ಸ್ಥಾನಕ್ಕೆ ಮತದಾನ ನಡೆಯಿತು. ಉಳಿದವರು ಅವಿರೋಧವಾಗಿ ಆಯ್ಕೆಯಾದರು.

ADVERTISEMENT

ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಚುನಾವಣಾ ಅಧಿಕಾರಿಯಾಗಿ ನಡೆಸಿಕೊಟ್ಟರು. ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.