ಕಾಸರಗೋಡು ಚಿನ್ನಾ
ಮಂಗಳೂರು: ಕುಂದಾಪುರದ ಕಾರ್ವಾಲ್ ಮನೆತನ ಹಾಗೂ ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ 21ನೇ ವರ್ಷದ ಕಲಾಕಾರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನಾ (ಶ್ರೀನಿವಾಸ ರಾವ್ ಎಸ್.) ಅವರನ್ನು ಆಯ್ಕೆ ಮಾಡಲಾಗಿದೆ.
ಪುರಸ್ಕಾರ ₹50 ಸಾವಿರ ನಗದು ಒಳಗೊಂಡಿದೆ. ನ.2ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಜೆ. ಪಿಂಟೊ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.