ಮಂಗಳೂರು: ‘ಉಳ್ಳಾಲ ಪಾಕಿಸ್ತಾನವಾಗಿದೆ’ ಎಂದು ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾನುವಾರ ಕಿನ್ಯದ ಕೇಶವ ಶಿಶುಮಂದಿರದ ಗ್ರಾಮ ವಿಕಾಸ ಸಪ್ತಾಹದಲ್ಲಿ ಡಾ.ಪ್ರಭಾಕರ್ ಭಟ್ ಮಾತನಾಡಿದ್ದಾರೆ. ‘ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ? ಅದು ಬೇರೆ ಆಗೋಕೆ ಸಾಧ್ಯ ಇದೆ’ ಎಂದು ಕೇಳಿದ್ದಾರೆ.
‘ಪಾಕಿಸ್ತಾನ ಯಾಕೆ ಆಯಿತು? ನಮ್ಮವರ ಸಂಖ್ಯೆ ಕಡಿಮೆ ಇತ್ತು, ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ’ ಎಂದಿದ್ದಾರೆ.
‘ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು’ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.