ADVERTISEMENT

ಕಲ್ಲಡ್ಕ‌ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 19:09 IST
Last Updated 5 ಏಪ್ರಿಲ್ 2022, 19:09 IST
ಕಲ್ಲಡ್ಕ‌ ಪ್ರಭಾಕರ ಭಟ್ (ಪ್ರಜಾವಾಣಿ ಸಂಗ್ರಹ ಚಿತ್ರ)
ಕಲ್ಲಡ್ಕ‌ ಪ್ರಭಾಕರ ಭಟ್ (ಪ್ರಜಾವಾಣಿ ಸಂಗ್ರಹ ಚಿತ್ರ)   

ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಅವರು ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದ ಮನೆಯಲ್ಲಿದ್ದ ಅವರಿಗೆ ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಕೊಂಚ ಸುಸ್ತು ಕಾಣಿಸಿಕೊಂಡಿತ್ತು. ತಪಾಸಣೆಗಾಗಿ ಎ.ಜೆ. ಆಸ್ಪತ್ರೆಗೆ ಬಂದಿದ್ದು, ಆರೋಗ್ಯದ ಬಗ್ಗೆ ನಿಗಾವಹಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅವರ ಆರೋಗ್ಯ ಸ್ಥಿರವಾಗಿದೆ. ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಆಸ್ಪತ್ರೆಗೆ ಭೇಟಿ‌ ನೀಡಿದ್ದ ನಗರ ಪೊಲೀಸ್ ಕಮಿಷನರ್ ಎನ್.‌ ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.