ಬಂಟ್ವಾಳ: ದೇಶದ ಕೆಲವು ಜನಪ್ರಿಯ ಆಹಾರ ಮತ್ತು ಪಾನೀಯಗಳ ಪೊಟ್ಟಣಗಳಲ್ಲಿ ದಷ್ಟ-ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರರಾಷ್ಟ್ರೀಯ ಮಟ್ಟದಲ್ಲೂ ಜನರನ್ನು ಆಕರ್ಷಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಹೇಳಿದರು.
ಇಲ್ಲಿನ ಸಿದ್ದಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎರಡನೇ ವರ್ಷದ ‘ರೋಟರಿ ಕಂಬಳ’ ಉದ್ಘಾಟಿಸಿ ಅವರು ಮಾತನಾಡಿದರು.
ಲೊರೆಟ್ಟೊ ಹಿಲ್ಸ್ ಸೇರಿದಂತೆ ಬಂಟ್ವಾಳ, ಮೊಡಂಕಾಪು, ಮಂಗಳೂರು ಸೆಂಟ್ರಲ್ ಮತ್ತು ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕಿರಿಯ ಮತ್ತು ಸಬ್ ಜೂನಿಯರ್ ವಿಭಾಗದ ಕಂಬಳ ಕಾರ್ಯಕ್ರಮದಲ್ಲಿ ಜಿಲ್ಲಾ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಭಾಗವಹಿಸಿದ್ದರು.
ಲೊರೆಟ್ಟೊ ಹಿಲ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಎಂ.ಪದ್ಮರಾಜ್ ಬಲ್ಲಾಳ್ ಮಾವಂತೂರು ಕಂಬಳ ಕರೆ ಉದ್ಘಾಟಿಸಿದರು.
ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಬೊಮ್ಮರೆಡ್ಡಿ, ಸಿದ್ದಕಟ್ಟೆ ಕೊಡಂಗೆ ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಕಕ್ಯಪದವು ಮೈರ ಕಂಬಳ ಸಮಿತಿ ಅಧ್ಯಕ್ಷ ಸುದರ್ಶನ್ ಬಜ, ರೋಟರಿ ಸಹಾಯಕ ಗವರ್ನರ್ ಎ.ಜಯಕುಮಾರ ಶೆಟ್ಟಿ, ಉಮೇಶ್ ರಾವ್ ಮಿಜಾರು, ಕೆ.ಪದ್ಮನಾಭ ರೈ ಕಲ್ಲಡ್ಕ, ಡಾ.ರಾಜಾರಾಮ್ ಉಪ್ಪಿನಂಗಡಿ, ಪ್ರಮುಖರಾದ ಡಾ.ದೇವದಾಸ್ ರೈ, ನಾರಾಯಣ ಹೆಗ್ಡೆ, ಡಾ.ಶಿವಪ್ರಕಾಶ್, ಲೊರೆಟ್ಟೊ ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್, ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಬಂಟ್ವಾಳ ಕ್ಲಬ್ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಸಿದ್ದಕಟ್ಟೆ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ಮೊಡಂಕಾಪು ಕ್ಲಬ್ ಅಧ್ಯಕ್ಷೆ ಪ್ರೀಮಾ ವೈಲೆಟ್ ಫರ್ನಾಂಡಿಸ್, ಮಂಗಳೂರು ಕ್ಲಬ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಮಾತನಾಡಿದರು.
ಪ್ರಮುಖರಾದ ಶ್ರುತಿ ಮಾಡ್ತಾ, ಡಾ.ಆತ್ಮ ರಂಜನ್ ರೈ, ಗಣೇಶ್ ಶೆಟ್ಟಿ ಸಿದ್ದಕಟ್ಟೆ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಜಾನ್ ಕೆನ್ಯೂಟ್ ಮಸ್ಕರೇನಸ್ ಉಪ್ಪಿನಂಗಡಿ, ಡಾ.ಪ್ರಹ್ಲಾದ್ ಮೈಸೂರು, ಪುಷ್ಪರಾಜ ಹೆಗ್ಡೆ, ಕಿರಣ್ ಹೆಗ್ಡೆ ಮಾಣಿ, ಕಿರಣ್ ಕುಮಾರ್ ಮಂಜಿಲ, ಮೈಕಲ್ ಡಿಕೋಸ್ತ, ಮೋಹನ್ ಕೆ.ಶ್ರೀಯಾನ್ ರಾಯಿ, ಮೊಹಮ್ಮದ್ ಯಾಸೀರ್ ಕಲ್ಲಡ್ಕ, ಟೀನಾ ಡಿಕೊಸ್ತ ಸಿದ್ದಕಟ್ಟೆ, ಪ್ರಸನ್ನ ರಾವ್ ಮೊಡಂಕಾಪು, ವಿಕಾಸ್ ಕೋಟ್ಯಾನ್ ಮಂಗಳೂರು, ರಾಜೇಶ್ ಶೆಟ್ಟಿ ಸೀತಾಳ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಮೈಕಲ್ ಡಿಕೋಸ್ತ, ಹೊನ್ನಯ ಕಾಟಿಪಳ್ಳ, ಪಿ.ಎ.ರಹೀಂ ಬಿ.ಸಿ.ರೋಡ್, ಕೆ.ರಮೇಶ್ ನಾಯಕ್, ಅಲೆಕ್ಸಾಂಡರ್ ಲೋಬೊ, ಶಶಿಧರ ಶೆಟ್ಟಿ ಕಲ್ಲಾಪು, ಸೀತಾರಾಮ ಶೆಟ್ಟಿ, ಹರೀಶ ಶೆಟ್ಟಿ, ಜಿಲ್ಲಾ ತೀರ್ಪುಗಾರ ವಿಜಯ ಕುಮಾರ್ ಕಂಗಿನಮನೆ, ಉಮೇಶ್ ಹಿಂಗಾಣಿ ಭಾಗವಹಿಸಿದ್ದರು.
ಕಂಬಳದ ಸಾರಥ್ಯ ವಹಿಸಿದ್ದ ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲಿಯಾಸ್ ಸಾಂಕ್ಟೀಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ರಾಜಗೋಪಾಲ್ ರೈ ವಂದಿಸಿದರು. ವಕೀಲ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಮತ್ತು ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.