ADVERTISEMENT

ಕಾಂಗ್ರೆಸನ್ನು ಕಿತ್ತೊಗೆಯಬೇಕು: ವಿಜಯೇಂದ್ರ

ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಗ್ರಾಮವಿಕಾಸ ಯಾತ್ರೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:47 IST
Last Updated 25 ಜನವರಿ 2023, 5:47 IST
ಬಂಟ್ವಾಳ ತಾಲ್ಲೂಕಿನ ಕೊಯಿಲದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ 10ನೇ ದಿನದ ಗ್ರಾಮ ವಿಕಾಸ್ ಯಾತ್ರೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
ಬಂಟ್ವಾಳ ತಾಲ್ಲೂಕಿನ ಕೊಯಿಲದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ 10ನೇ ದಿನದ ಗ್ರಾಮ ವಿಕಾಸ್ ಯಾತ್ರೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.   

ಬಂಟ್ವಾಳ: ‘ದೇಶದಲ್ಲಿ ಸ್ವಾತಂತ್ರ್ಯ ನಂತರ ಮಹಾತ್ಮ ಗಾಂಧಿ ಕನಸಿನಂತೆ ಕಾಂಗ್ರೆಸ್ ಪಕ್ಷ ವಿಸರ್ಜನೆ ಮಾಡಿಲ್ಲ. ಅದನ್ನು ಭಾರತ್ ಜೋಡೊ ಯಾತ್ರೆ ಮೂಲಕ ರಾಹುಲ್ ಗಾಂಧಿ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು.

ಕೊಯಿಲದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ 10ನೇ ದಿನದ ಗ್ರಾಮವಿಕಾಸ್ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಜೆಗಳಿಂದಲೇ ಧಿಕ್ಕರಿಸಲ್ಪಟ್ಟ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪ್ರಜಾಯಾತ್ರೆ ನಡೆಸುವ ನಾಟಕವಾಡುತ್ತಿದೆ. ಅದನ್ನು ಸಂಪೂರ್ಣ ಕಿತ್ತೊಗೆಯಬೇಕು ಎಂದರು.

ADVERTISEMENT

ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಈ ಕ್ಷೇತ್ರದಲ್ಲಿ ರಸ್ತೆ, ನೀರು ಸೇರಿದಂತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಬಿ.ದೇವದಾಸ ಶೆಟ್ಟಿ, ಮಾಧವ ಎಸ್.ಮಾವೆ, ಸುದರ್ಶನ್ ಬಜ, ಡೊಂಬಯ ಅರಳ, ರವೀಶ ಶೆಟ್ಟಿ ಕರ್ಕಳ, ರಮಾನಾಥ ರಾಯಿ, ಸಂದೇಶ ಶೆಟ್ಟಿ, ವಸಂತ ಕುಮಾರ್ ಅಣ್ಣಳಿಕೆ, ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ಸಂತೋಷ್ ಕುಮಾರ್ ಬೆಟ್ಟು, ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ ಆನಂದ, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪಂಜಿಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.