ADVERTISEMENT

ಸಚಿವ ಆನಂದ್ ಸಿಂಗ್ ಬೇಡಿಕೆಗಳನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 12:42 IST
Last Updated 12 ಆಗಸ್ಟ್ 2021, 12:42 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಮಂಗಳೂರು: ಖಾತೆ ಹಂಚಿಕೆ ವಿಷಯದಲ್ಲಿ ಅತೃಪ್ತರಾಗಿರುವ ಆನಂದ್ ಸಿಂಗ್ ಅವರು ತಿಳಿಸಿರುವ ಬೇಡಿಕೆಗಳನ್ನು ಪಕ್ಷದ ದೆಹಲಿ ವರಿಷ್ಠರಿಗೆ ತಲುಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಯಚೂರು ಜಿಲ್ಲೆದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ, ಯಾದಗಿರಿ ಸುರಪುರದ ರಾಜುಗೌಡ ಸೇರಿದಂತೆ ಅತೃಪ್ತರು ಎಂದು ಬಿಂಬಿತರಾದವರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

‘ಆನಂದ್ ಸಿಂಗ್ ಕೆಲವು ವಿಷಯಗಳನ್ನು ತಿಳಿಸಿದ್ದಾರೆ. ಅದನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ’ ಎಂದರು.

ಹುಕ್ಕಾ ಬಾರ್: ಕಾಂಗ್ರೆಸ್ ಕಚೇರಿಗಳನ್ನು ನೆಹರೂ ಹುಕ್ಕಾಬಾರ್ ಎಂದು ಬದಲಿಸಿ ಎಂಬುದಾಗಿ ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿಕೆ ಬಗ್ಗೆ, ಅದು ಅವರ ಅಭಿಪ್ರಾಯ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆಯೂ ರವಿ ಅಭಿಪ್ರಾಯ ಹೇಳಿದ್ದಾರೆ, ಸರ್ಕಾರದ ನಿರ್ಧಾರ ನಾವು ತೀರ್ಮಾನಿಸುತ್ತೇವೆ ಎಂದರು.

ADVERTISEMENT

ಸಾರ್ವಜನಿಕ ಗೌರವ ವಂದನೆ ಬೇಡ: ಪೊಲೀಸರು ವಿಮಾನ ನಿಲ್ದಾಣ ಮುಂತಾದ ಸಾರ್ವಜನಿಕ ಜಾಗಗಳಲ್ಲಿ ಮುಖ್ಯಮಂತ್ರಿ, ವಿಶಿಷ್ಟ ವ್ಯಕ್ತಿಗಳಿಗೆ ಗೌರವ ವಂದನೆ (ಗಾರ್ಡ್ ಆಫ್ ಆನರ್) ಸಲ್ಲಿಸುವುದು ಬೇಡ. ಪೊಲೀಸ್ ಇಲಾಖೆ ಕಾರ್ಯಕ್ರಮಗಳಲ್ಲಷ್ಟೇ ಸಾಕು ಎಂದು ತಿಳಿಸಿದ್ದೇನೆ. ಈ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಆಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.